ದೆಹಲಿ ಅಂತರರಾಷ್ಟ್ರೀಯ ಚಿತ್ರೋತ್ಸವ ಮತ್ತು ಚಿಕಾಗೊ ಚಿತ್ರೋತ್ಸವಗಳ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿದ್ದು, ಚಿಕಾಗೊ ಚಿತ್ರೋತ್ಸವದ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದೆ.
‘ಸ್ವಪ್ನಮಂಟಪ’ ಚಿತ್ರವು ಅದೇ ಹೆಸರಿನ ಬರಗೂರರ ಕಾದಂಬರಿಯನ್ನು ಆಧರಿಸಿದ ಸಿನಿಮಾವಾಗಿದೆ.
ಬರಗೂರರೇ ಚಿತ್ರಕಥೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ.ನಾಡಿನ ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆಯ ಅಗತ್ಯವನ್ನು ಮನಗಾಣಿಸುವ ಕಥಾವಸ್ತುವನ್ನು ‘ಸ್ವಪ್ನಮಂಟಪ’ ಚಿತ್ರವು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ‘ಸ್ವಪ್ನಮಂಟಪ’ವನ್ನು ನಿರ್ಮಾಣ ಮಾಡಿರುತ್ತಾನೆ. ಈ ಚಾರಿತ್ರಿಕ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನಕ್ಕೆ ಚಿತ್ರದ ನಾಯಕ-ನಾಯಕಿ ತಡೆಯೊಡ್ಡುತ್ತಾರೆ. ಜನರಲ್ಲಿ ಜಾಗೃತಿ ಮೂಡಿಸುತ್ತಾರೆ.

ಕಥಾನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜನಿ ರಾಘವನ್ ಇಬ್ಬರೂ ದ್ವಿಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ತಾರಾಗಣದಲ್ಲಿ ಸುಂದರರಾಜ್, ರಜನಿ, ಶೋಭಾ ರಾಘವೇಂದ್ರ, ರಾಜಪ್ಪ ದಳವಾಯಿ, ಸುಂದರರಾ ಅರಸು, ಮಹಾಲಕ್ಷ್ಮೀ, ಅಂಬರೀಶ್ ಸಾರಂಗಿ, ವೆಂಕಟರಾಜು, ಶಿವಲಿಂಗ ಪ್ರಸಾದ್ ಮುಂತಾದವರು ಇದ್ದಾರೆ. ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ..