ವೈರಲ್

ಮನೆ ಗೋಡೆ ಕುಸಿದು 75 ವರ್ಷದ ವೃದ್ಧೆ ಸಾವು

ನಿರಂತರ ಮಳೆಗೆ ಮನೆಯ ಗೋಡೆ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವೃದ್ಧೆ ಕುಟುಂಬಕ್ಕೆ ಕೇಂದ್ರ ಸರ್ಕಾರದ ಎಸ್‌ ಡಿಆರ್‌ ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಮತ್ತು ಹೆಚ್ಚುವರಿಯಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಹಣವನ್ನು ವಿತರಿಸಿದರು.

ಚಿತ್ರದುರ್ಗ : ಈಶಾನ್ಯ ಮಾನ್ಸೂನ್ ಆರಂಭವಾದ ಹಿನ್ನೆಲೆ ರಾಜ್ಯದಲ್ಲಿ ಹಲವೆಡೆ ತುಂತುರು ಮಳೆ ಸುರಿಯುತ್ತಿದ್ದು, ಚಿತ್ರದುರ್ಗದಲ್ಲಿ ಮನೆಯ ಗೋಡೆ ಒಂದು ಕುಸಿದು ಬಿದ್ದು ವೃದ್ಧೆ ಸಾವನ್ನಪ್ಪಿದ ಘಟನೆಯೊಂದು ತಾಲೂಕಿನ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಗಮ್ಮ(75) ವರ್ಷದ ಮೃತ ದುರ್ದೈವಿಯಾಗಿದ್ದಾರೆ.

ನಿರಂತರ ಮಳೆಗೆ ಮನೆಯ ಗೋಡೆ ಕುಸಿದಿದೆ. ಈ ವೇಳೆ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವೃದ್ಧೆ ಕುಟುಂಬಕ್ಕೆ ಕೇಂದ್ರ ಸರ್ಕಾರದ ಎಸ್‌ ಡಿಆರ್‌ ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಮತ್ತು ಹೆಚ್ಚುವರಿಯಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಹಣವನ್ನು ವಿತರಿಸಿದರು.