ಮಂಡ್ಯ ಜಿಲ್ಲೆ ಪಾಂಡವಪುರ ಟೌನ್ ಪೊಲೀಸ್ ಠಾಣೆಯಲ್ಲಿ, ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಜಮೀನು ವಿವಾದ ಹಿನ್ನೆಲೆ ಸಾಗರ್ ಎಂಬಾತನನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು, ಮೊದಲು ಪೊಲೀಸ್ ಕಾನ್ಸ್ಟೇಬಲ್ ಅಭಿಷೇಕ್ ಕೈ ಮಾಡುತ್ತಾರೆ. ಆಗ ಸಾಗರ್ ಪ್ರತಿದಾಳಿ ಮಾಡಿ ಪೇದೆ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಮಾಡುತ್ತಾರೆ. ಬಳಿಕ ಪರಾರಿಯಾಗಲು ಯತ್ನಿಸಿದ ಸಾಗರ್ನ ಪೊಲೀಸು ವಶಕ್ಕೆ ಪಡೆದಿದ್ದಾರೆ.