ಮೈಸೂರು : ಇದ್ದಿಲು ಸಾಗಿಸುತ್ತಿದ್ದ ಲಾರಿಗೆ ಏಕಾಏಕಿ ಬೆಂಕಿ ತಗುಲಿ, ಲಾರಿ ಸಂಪೂರ್ಣ ಕರಕಲಾಗಿದೆ. ಮೈಸೂರಿನ ಹೊರವಲಯದ ಹೂಟಗಳ್ಳಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಬಚಾವ್ ಆಗಿದ್ದಾನೆ. ನೋಡನೋಡುತ್ತಿದ್ದಂತೆ ಲಾರಿ ಬೆಂಕಿಗಾಹುತಿಯಾಗಿದ್ದು, ಈ ಘಟನೆಯನ್ನ ಕಣ್ಣಾರೆ ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಗ್ನಿ ಅವಘಡಕ್ಕೆ ಇನ್ನೂ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ.