ವೈರಲ್

ಮನೆಯವರ ಎದುರು ಅವಮಾನ ಮಾಡಿದ್ದಾರೆಂದು ಆರೋಪ ; KSRTC ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್

ರಿತೇಶ್ ಹಾಜರಾತಿ ಸರಿ ಇಲ್ಲವೆಂದು ಕುಟುಂಬದ ಸದಸ್ಯರನ್ನ ಕರೆಸಿ ಡಿಸಿ ಕೌನ್ಸಿಲಿಂಗ್ ಮಾಡಿದ್ದರು. ಕುಟುಂಬದವರ ಮನವಿ ಮೇರೆಗೆ ರಿತೇಶ್‍ ನನ್ನು ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆ ಕೂಡ ಮಾಡಿದ್ದರು.ಇದರಿಂದ ತನಗೆ ಮನೆಯವರ ಎದುರು ಅವಮಾನ ಮಾಡಿದ್ದಾರೆ ಎಂದು ಆರೋಪಿ ಈ ಕೃತ್ಯ ಎಸಗಿದ್ದಾನೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ ಲ್ದಾಣದಲ್ಲಿ ನಡೆದಿದೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ವಾಹನ ಹತ್ತುವ ವೇಳೆ ಅಡ್ಡಗಟ್ಟಿದ ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಇರಿಯಲು ಮುಂದಾಗಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಅಧಿಕಾರಿಯ ಕೈಗೆ  ಗಂಭೀರ ಗಾಯವಾಗಿದೆ.

ರಿತೇಶ್ ಹಾಜರಾತಿ ಸರಿ ಇಲ್ಲವೆಂದು ಕುಟುಂಬದ ಸದಸ್ಯರನ್ನ ಕರೆಸಿ ಡಿಸಿ ಕೌನ್ಸಿಲಿಂಗ್ ಮಾಡಿದ್ದರು. ಕುಟುಂಬದವರ ಮನವಿ ಮೇರೆಗೆ ರಿತೇಶ್‍ ನನ್ನು ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆ ಕೂಡ ಮಾಡಿದ್ದರು.ಇದರಿಂದ ತನಗೆ ಮನೆಯವರ ಎದುರು ಅವಮಾನ ಮಾಡಿದ್ದಾರೆ ಎಂದು ಆರೋಪಿ ಈ ಕೃತ್ಯ ಎಸಗಿದ್ದಾನೆ.

ಸದ್ಯ, ಗಾಯಗೊಂಡ ಅಧಿಕಾರಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ರಿತೇಶ್ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.