ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎರಡನೇ ಪುತ್ರನ ನಾಮಕರಣ ಅದ್ದೂರಿಯಾಗಿ ನೆರವೇರಿವೇರಿದೆ. ಮಹಾರಾಜ ಯದುವೀರ್ ದ್ವಿತೀಯ ಪುತ್ರನಿಗೆ ಚಿರಂಜೀವಿ ಶ್ರೀ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಲಾಗಿದೆ.
ಮೈಸೂರು ಅರಮನೆಯ ಅಂಗಳದಲ್ಲಿ ಶಾಸ್ತ್ರೋಕ್ತವಾಗಿ ನಾಮಕರಣ ಕಾರ್ಯಕ್ರಮ ನೆರವೇರಿದ್ದು, ಚಾಮುಂಡೇಶ್ವರಿ ಅಮ್ಮನವರ ಅನುಗ್ರಹದಿಂದ ಎರಡನೆ ಮಗುವಿಗೆ ಅರಮನೆಯ ಸಂಪ್ರದಾಯದಂತೆ ನಾಮಕರಣ ನೆರವೇರಿದೆ.
ಶ್ರೀಮತಿ ಡಾ. ಪ್ರಮೋದಾ ದೇವಿ ಒಡೆಯರ್ ಅವರು ಮೊಮ್ಮಗನಿಗೆ ಚಿರಂಜೀವಿ ಶ್ರೀ ಯುಗಾಧ್ಯಕ್ಷ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಿದ್ದು ಈ ಸಂಬ್ರಮವನ್ನ ನಾಡಿನ ಜನತೆಯೊಂದಿಗೆಹಂಚಿಕೊಂಡಿದ್ದಾರೆ.
ನಾಮಕರಣ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿಯೊಬ್ಬ ಹಿತೈಷಿಗಳಿಗೂ ನಮ್ಮ ಹೃತ್ಪೂರ್ವಕವಾದ ವಂದನೆಗಳನ್ನು ತಿಳಿಸುತ್ತೇವೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.