ಕರ್ನಾಟಕ

ಕರ್ತವ್ಯಲೋಪ ಹಿನ್ನೆಲೆ: 80 ಪೊಲೀಸ್‌ ಸಿಬಂದಿ ಸಸ್ಪೆಂಡ್..!

ಜಿಲ್ಲೆಯಲ್ಲಿ ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದ್ದು, ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು.

ಉಡುಪಿ : ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್‌ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು ಮಾಡಿ ವರ್ಗಾವಣೆ ಶಿಕ್ಷೆ ನೀಡಲಾಗಿದೆ.

2 Cops Suspended For Skipping Duty – Kashmir Observer

 

ಹೌದು, ಜಿಲ್ಲೆಯಲ್ಲಿ ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದ್ದು, ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು.

4 ಮಂದಿ ಎಸ್‌ ಐಗಳು ; ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ ಐಗಳ ಪೈಕಿ ಕೆಲವರ ಅಮಾನತು ಆದೇಶ ಮಾಡಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು.


ಶಿಕ್ಷೆ ಹೇಗೆ ?

ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್‌ ಪಿ ಅವರ ಗಮನಕ್ಕೆ ತರಬಹುದು. ಎಸ್‌ ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್‌ ಇನ್‌ಸ್ಪೆಕ್ಟರ್‌ ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್‌ ಸ್ಟೆಬಲ್‌ ಗ‌ಳ ವಿರುದ್ಧ ಆರೋಪ ಬಂದಾಗ ಎಸ್‌ ಐಗಳು ಹಾಗೂ ಇನ್‌ ಸ್ಪೆಕ್ಟರ್‌ ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್‌ ಪಿ ವರದಿ ನೀಡಬೇಕು. ಆದರೆ ಅರ್ಧ ವೇತನ ಅಮಾನತು ಆದೇಶ ಕನಿಷ್ಠ 1 ತಿಂಗಳಿನಿಂದ ಗರಿಷ್ಠ ಎಷ್ಟು ಸಮಯದವರೆಗೂ ನೀಡ ಬಹುದು. ಅಮಾನತು ಗೊಂಡವರು ಅರ್ಧದಷ್ಟು ವೇತನ ಪಡೆಯುತ್ತಾರೆ.