ಕರ್ನಾಟಕ

ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಂರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದಿರಾ? ಪ್ರಯಾಪ್ ಸಿಂಹ ಕಿಡಿ

ಸಿಎಂ ಗೆ ಮೂಡಾ ಕಷ್ಟ ಎದುರಾದಾಗ ಚಾಮುಂಡಿ ತಾಯಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿಎಂ ಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೆ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಸಿಎಂ ಈಗ ಹಿಂದೂಗಳ ವಿರುದ್ದ ನಿಲುವು ತೆಗೆದು ಕೊಳ್ಳವುದಿಲ್ಲ ಎಂದು ಕೊಂಡಿದ್ದೇನೆ.

ಮೈಸೂರು : ಮುಸ್ಲಿಂರು ವಕ್ಫ್ ಆಸ್ತಿ ಅಂತಾರಲ್ಲ ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿನಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಂರಿಗೆ  ಎಲ್ಲಿಂದ ಬಂತು. ಯಾರಿಂದ ಅವರಿಗೆ ಬಳುವಳಿ ಬಂದಿದ್ದು ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

Pratap Simha : ಬಿಜೆಪಿ ಸರ್ಕಾರದ 40% ಹಗರಣದ ತನಿಖೆಯಾಗಲಿ- ಪ್ರತಾಪ್ ಸಿಂಹ -  Navasamaja

ಈ ಕುರಿತು ಮಾತನಾಡಿದ ಅವರು, ಮೈಸೂರಿನ ಹುಣಸೂರಿನಲ್ಲೂ ಗಣೇಶ ದೇವಾಲಯದ 17 ಏಕರೆ ನಮ್ಮದ್ದು ಅಂತಾ ವಕ್ಫ್ ಬೋರ್ಡ್ ಕೂತಿದೆ. ಚಿಕ್ಕಮಗಳೂರು ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡುತ್ತಾ ಇದು ನಮ್ಮದು ಅಂತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ  ಮುಸ್ಲಿಂ ರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದಿರಾ? ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ ಗಳಲ್ಲಿ ಹಿಡಿ ಅನ್ನ ಯಾರಿಗಿದ್ದಾರು ಹಾಕಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ. 

ಸಿಎಂ ಗೆ ಮೂಡಾ ಕಷ್ಟ ಎದುರಾದಾಗ ಚಾಮುಂಡಿ ತಾಯಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿಎಂ ಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೆ ಹೊರತು ಬೇರೆ ಧರ್ಮದವರಲ್ಲ.
ಹೀಗಾಗಿ ಸಿಎಂ ಈಗ  ಹಿಂದೂಗಳ ವಿರುದ್ದ ನಿಲುವು ತೆಗೆದು ಕೊಳ್ಳವುದಿಲ್ಲ ಎಂದು ಕೊಂಡಿದ್ದೇನೆ. ಪ್ರಧಾನ ಮಂತ್ರಿಗಳು ವಕ್ಫ ಕಾಯ್ದೆ, ವಕ್ಫ್ ಬೋರ್ಡ್ ಅನ್ನೆ ರದ್ದು ಮಾಡಬೇಕು ಎಂದರು.

ಮೂಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು,, ಇಡಿ ತನಿಖೆ ಶುರು ಮಾಡಿದ ಮೇಲೆ ಮೂಡಾ ಕ್ಲೀನ್ ಆಗಬಹುದು ಎಂಬ ನಂಬಿಕೆ ಬಂದಿದೆ. 50: 50 ಅನುಪಾತದಲ್ಲಿ ಅಕ್ರಮವಾಗಿ ಸೈಟ್ ಪಡೆದವರ ಎಲ್ಲಾ ಸೈಟ್ ವಾಪಾಸ್ ಕಿತ್ತುಕೊಳ್ಳಿ. ಮೈಸೂರಿಗೆ ಒಳ್ಳೆಯ ನಗರಾಭಿವೃದ್ಧಿ ಪ್ರಾಧಿಕಾರ ಬೇಕು.  ಒಳ್ಳೆಯ ಜನಪ್ರತಿನಿಧಿಗಳು ಬೇಕು ಎಂದು ಹೇಳಿದ್ದಾರೆ.

ಯತ್ನಾಳ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಯತ್ನಾಳ್ ಬಿಜೆಪಿ ಜನಪ್ರಿಯ ನೇತಾರ. ಯತ್ನಾಳ್ ರೆ ವಕ್ಫ್ ಆಕ್ರಮದ ಬಗ್ಗೆ ಮೊದಲು ಧ್ವನಿ ಎತ್ತಿದ್ದು. ವಕ್ಫ್ ವಿಚಾರದಲ್ಲಿ ಸತ್ಯ ಶೋಧನೆಗೆ ಕಣ್ತಪಿನಿಂದ ಯತ್ನಾಳ್ ಕೈ ಬಿಟ್ಟು ಹೋಗಿತ್ತು ಅಷ್ಟೆ. ಸಿಎಂ ಮೊದಲು ಕೇಸರಿ ಶಾಲು ಹಾಕಿದರೆ ಕಿತ್ತು ಬಿಸಾಕುತ್ತಿದ್ದರು. ಮೂಡಾ ಪ್ರಕರಣ ನಂತರ ಹಿಂದೂ ಧರ್ಮದ ಮೇಲೆ  ನಂಬಿಕೆ ಬಂದಿದೆ. ನಮ್ಮ ದೇವರ ಮೇಲೆ ಶ್ರದ್ಧೆ, ಭಕ್ತಿ ಕೂಡ ಸಿಎಂ ಗೆ ಬಂದಿದೆ. ನಾನು ಕೂಡ ಯತ್ನಳ್ ಜೊತೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹರಿಹಾಯ್ದಿದ್ದಾರೆ.