ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ಗೆ ಟೀಂ ಇಂಡಿಯಾ ಸಿದ್ಧವಾಗ್ತಿದೆ. ಟ್ರೋಫಿಯಲ್ಲಿ 2-1ರಲ್ಲಿ ಹಿನ್ನಡೆ ಸಾಧಿಸಿರುವ ಭಾರತಕ್ಕೆ ಆಸ್ಟ್ರೇಲಿಯಾದ ಸಿಡ್ನಿ ಟೆಸ್ಟ್ ಪ್ರಮುಖವಾಗಿದೆ. ಗೆಲ್ಲುವ ಮೂಲಕ ಟೆಸ್ಟ್ ಸರಣಿ ಸಮಬಲ ಮಾಡಿಕೊಳ್ಳಬೇಕಾಗಿದೆ. ಈ ಮಧ್ಯೆ ಭಾರತ ಕ್ರಿಕೆಟ್ ತಂಡದ ʼಡ್ರೆಸಿಂಗ್ ರೂಮ್ʼ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋಚ್ ಗೌತಮ್ ಗಂಭೀರ್ ಮತ್ತು ಆಟಗಾರರ ಮಧ್ಯೆ ಹೊಂದಾಣಿಕೆ ಇಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಕೋಚ್ ಗೌತಮ್ ಗಂಭೀರ ಪ್ರತಿಕ್ರಿಯೆ ನೀಡಿದ್ದು ಎಲ್ಲವೂ ಸರಿಯಾಗಿಯೇ ಇದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿದ್ದಾರೆ. ಟೆಸ್ಟ್ ಪಂದ್ಯವನ್ನು ಗೆಲ್ಲಲು ಸಾಧ್ಯವಾಗುವ ಎಲ್ಲವನ್ನೂ ನಾವು ಆ ಡ್ರೆಸ್ಸಿಂಗ್ ರೂಮ್ನಲ್ಲಿ ಹೊಂದಿದ್ದೇವೆ. ತಂಡ ಮೊದಲು. ಇದು ತಂಡದ ಆಟ, ಮತ್ತು ಪ್ರತಿಯೊಬ್ಬರೂ ಇದನ್ನು ಅರ್ಥಮಾಡಿಕೊಳ್ಳುತ್ತಾರೆ. ಆಟಗಾರ ಮತ್ತು ಕೋಚ್ ನಡುವಿನ ಚರ್ಚೆಗಳು ಅವರ ನಡುವೆ ಉಳಿಯಬೇಕು. ಡ್ರೆಸ್ಸಿಂಗ್ ರೂಮ್ನಲ್ಲಿ ಯಾವುದೇ ಸಂಭಾಷಣೆಗಳು ಡ್ರೆಸ್ಸಿಂಗ್ ರೂಮ್ನಲ್ಲಿ ಉಳಿಯಬೇಕು ಎಂದಿದ್ದಾರೆ.