ವೈರಲ್

ಕ್ಷುಲ್ಲಕ ಕಾರಣಕ್ಕೆ ತಲ್ವಾರ್ ನಿಂದ ಹೊಡೆದಾಟ : ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿಯ ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಗಲಾಟೆ ಶುರುವಾಗಿದ್ದು, ಮೆರವಣಿಗೆ ಮುಗಿಸಿಕೊಂಡು ವಾಪಸ್ ಬರುವ ವೇಳೆ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಂದೆ.

ಬೆಳಗಾವಿ : ಈದ್ ಮಿಲಾದ್ ಮೆರವಣಿಗೆಯ ನಂತರ ಕೆಲ ಯುವಕರು ಕ್ಷುಲ್ಲಕ ಕಾರಣಕ್ಕೆ ಗಲಾಟೆ ತಲ್ವಾರ್ ನಿಂದ ಹೊಡೆದಾಡಿಕೊಂಡಿದ್ದಾರೆ. ಬೆಳಗಾವಿಯ ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಗಲಾಟೆ  ಶುರುವಾಗಿದ್ದು, ಮೆರವಣಿಗೆ ಮುಗಿಸಿಕೊಂಡು ವಾಪಸ್ ಬರುವ ವೇಳೆ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಂದೆ.

Crime : ಈದ್ ಮಿಲಾದ್ ಮೆರವಣಿಗೆಯ ನಂತರ ತಲ್ವಾರ್ ನಿಂದ ಹೊಡೆದಾಟ - ನಾಲ್ವರ ಸ್ಥಿತಿ ಗಂಭೀರ.!

ಈ ಘಟನೆಯಲ್ಲಿ ನಾಲ್ವರಿಗೆ ಕುತ್ತಿಗೆ ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಮೊಹಮ್ಮದ್ ಕೈಫ್, ಸಾಹಿಲ್ ಬಂಡಾರಿ, ತನ್ವೀರ್, ಅಹಂ ಅಂಡರ್ ಎಂದು ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಪ್ರಕರಣದ ಸಂಬಂಧ ಮಾಳ ಮಾರುತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.