ಕರ್ನಾಟಕ

ತುಮಕೂರಿನಲ್ಲಿ ವರುಣಾರ್ಭಟ..ಬೆಳೆ ಹಾನಿಯಾಗಿ ಪರಿಹಾರ ಸಿಗದೇ ಅನ್ನದಾತರು ಕಣ್ನೀರು..!

ತರೆದಕುಪ್ಪೆ ಗ್ರಾಮದ ರೈತ ನಂಜುಂಡೇಗೌಡ ಎಂಬುವರು, ಸುಮಾರು 2 ಎಕರೆ ಜಾಗದಲ್ಲಿ ಬೆಳೆದಿದ್ದ ಟೊಮ್ಯಾಟೋ ಬೆಳೆ ನಾಶವಾಗಿದೆ. ಇದರಿಂದ ಸುಮಾರು 5 ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದ ರೈತನಿಗೆ ನಿರಾಸೆಯಾಗಿದೆ.

ತುಮಕೂರು ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಹೆಚ್ಚಾಗಿದೆ. ಕುಣಿಗಲ್ ತಾಲೂಕಿನ ತರೆದಕುಪ್ಪೆ ಗ್ರಾಮದ ರೈತ ನಂಜುಂಡೇಗೌಡ ಎಂಬುವರು, ಸುಮಾರು 2 ಎಕರೆ ಜಾಗದಲ್ಲಿ ಬೆಳೆದಿದ್ದ ಟೊಮ್ಯಾಟೋ ಬೆಳೆ ನಾಶವಾಗಿದೆ. ಇದರಿಂದ ಸುಮಾರು 5 ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದ ರೈತನಿಗೆ ನಿರಾಸೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದು, ಈವರೆಗೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಕೂಡಲೇ ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.