ಕರ್ನಾಟಕ

ಯೋಗೇಶ್ವರ್​​​​​​ ಕಾಂಗ್ರೆಸ್ ಗೆ ಬಂದಿರುವುದು ನಮಗೆ ಮತ್ತಷ್ಟು ಬಲ; ಹೆಚ್.ಎಂ.ರೇವಣ್ಣ

ಯೋಗೇಶ್ವರ್​​ ಕಾಂಗ್ರೆಸ್ ಗೆ ಬಂದಿರುವುದು ಮತ್ತಷ್ಟು ಬಲ ಬಂದಂತಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ.

ಯೋಗೇಶ್ವರ್ ಕಾಂಗ್ರೆಸ್ ಗೆ ಬಂದಿರುವುದು ಮತ್ತಷ್ಟು ಬಲ ಬಂದಂತಾಗಿದೆ ಎಂದು, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಯೋಗೇಶ್ವರ್ ಮೂಲತಃ ಕಾಂಗ್ರೆಸ್ಸಿಗ, ಕಾಂಗ್ರೆಸ್ ನಿಂದ ಎಂಎಲ್ಎ ಆಗಿದ್ದರು. ಅವರನ್ನು NDA ಸರಿಯಾಗಿ ನಡೆಸಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣದಲ್ಲಿ ಕೆರೆಗಳನ್ನ ತುಂಬಿಸಿ ರೈತರ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ಭಗೀರಥ ಅಂತಾರೆ. ಜೆಡಿಎಸ್-ಬಿಜೆಪಿ ಅವರ ಕೆಲಸ ಅವರು ಮಾಡಲಿ. ಜನರ ಬೆಂಬಲ ನಮಗೆ ಸಿಗುವ ವಿಶ್ವಾಸ ಇದೆ‌. ನಮ್ಮದೇ ಆದ ತಂತ್ರಗಾರಿಕೆ ಇದೆ ಅದನ್ನ ನಾವು ಮಾಡ್ತೇವೆ ಎಂದು ಹೇಳಿದ್ದಾರೆ.