ಕರ್ನಾಟಕ

ಸಾಲ ಭಾದೆ ತಾಳಲಾರದೇ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು, ಪತ್ನಿ ಸ್ಥಿತಿ ಗಂಭೀರ..!

ಸಾಲಭಾದೆ ತಾಳಲಾರದೆ ದಂಪತಿ ಮಾತ್ರೆ ಸೇವಿಸಿದ್ದು, ಪತಿ ಸಾವನ್ನಪ್ಪಿದ್ದಾರೆ. ಪತ್ನಿ ಸ್ಥಿತಿ ಗಂಭೀರವಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿ, ಸಾಲಭಾದೆ ತಾಳಲಾರದೆ ದಂಪತಿ ಮಾತ್ರೆ ಸೇವಿಸಿದ್ದು, ಪತಿ ಸಾವನ್ನಪ್ಪಿದ್ದಾರೆ. ಪತ್ನಿ ಸ್ಥಿತಿ ಗಂಭೀರವಾಗಿದೆ. 47 ವರ್ಷದ ಅನಿಲ್ ಮೃತ ದುರ್ದೈವಿಯಾಗಿದ್ದು, 45 ವರ್ಷದ ಉಮಾ ಆಸ್ಪತ್ರೆಯಲ್ಲಿ 

ಹಲವು ವರ್ಷಗಳಿಂದ ಕುಣಿಗಲ್ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ, ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ ಇತ್ತೀಚೆಗೆ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಸುಮಾರು 8, 10 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ನೀಡಿದವರ ಕಿರುಕುಳಕ್ಕೆ ಬೇಸತ್ತು, ನಿನ್ನೆ ಸಂಜೆ ತಮ್ಮ ಮನೆಯಲ್ಲಿ ದಂಪತಿ ಮಾತ್ರೆ ಸೇವಿಸಿದ್ದರು. ಘಟನಾ ಸ್ಥಳಕ್ಕೆ ತುಮಕೂತು ಎಸ್ಪಿ ಅಶೋಕ್ ಕೆ.ವಿ ಹಾಗೂ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.