ಚಿಕ್ಕೋಡಿ : ಬೆಳಗಾವಿ ಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಳಿಕ ರಮೇಶ ಕತ್ತಿ ಸುದ್ದಿಗೋಷ್ಠಿ ನಡೆಸಿದ್ದು, ಸ್ವ ಗ್ರಾಮ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, ನೋವಾಗಿ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇನೆ. 42 ವರ್ಷದಲ್ಲಿ ಇಂಥ ಪರಿಸ್ಥಿತಿ ಬಂದಿರಲಿಲ್ಲ. ಎಲ್ಲರ ಜೊತೆ ಚರ್ಚೆ ಮಾಡಿ ರಾಜೀನಾಮೆ ಕೊಟ್ಟಿದ್ದೇನೆ. 27 ವರ್ಷ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ.
)
ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ನನಗೆ 60 ವರ್ಷ ಆದ ಕಾರಣ ರಾಜೀನಾಮೆ ನೀಡಿದ್ದೇನೆ. ಎಲ್ಲ ನಿರ್ದೇಶಕರು ಒಗ್ಗಟ್ಟಾಗಿ ಇದ್ದೇವೆ. ಎಲ್ಲರ ಜೊತೆ ವಿಚಾರ ಮಾಡಿ ರಾಜೀನಾಮೆ ಮಾಡಿದ್ದೇನೆ. ಅವಿಶ್ವಾಸ ನಿರ್ಣಯ ಮಾಡುವ ಚರ್ಚೆ ಆಗಿಲ್ಲ, ಯಾವೂ ನಿರ್ದೇಶಕರು ನನ್ನ ವಿರೋಧಿ ಕೆಲಸ ಮಾಡಿಲ್ಲ, ಪಕ್ಷಾತೀತವಾಗಿ ಎಲ್ಲರೂ ಸಹಕಾರ ನೀಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ, ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿ, ಹೊಸ ಸದಸ್ಯತ್ವ ಮಾಡುವ ವಿಚಾರದಲ್ಲಿ ಗೊಂದಲ ನಿರ್ಮಾಣವಾಗಿತ್ತು. ಅದು ಅತಿರೇಕಕ್ಕೆ ಹೋದ ಕಾರಣ ರಾಜಕಾರಣ ಒತ್ತಡದಿಂದ ನಾನೇ ನಿರ್ಧಾರ ಮಾಡಿದ್ದೇನೆ. ಸದಸ್ಯತ್ವ ಮಾಡುವ ಕುರಿತು ಕನಕ್ಲೂಸನ ಆಗದ ಕಾರಣ ರಾಜೀನಾಮೆ ನೀಡಿದ್ದೇನೆ. 42 ವರ್ಷದಲ್ಲಿ ನನ್ನ ಕಡೆನೂ ತಪ್ಪಾಗಿದ್ದರೂ ಅದು ಬ್ಯಾಂಕಿನ ಹಿತದೃಷ್ಟಿಯಿಂದ ಮಾಡಿರಬಹದು. ತಪ್ಪಿನಿಂದ ನೋವಿದ್ದರೇ ವಿಷಾಧ ವ್ಯಕ್ತಪಡಿಸುತ್ತೇನೆ. ಬ್ಯಾಂಕ್ ಸದೃಡವಾಗಿತ್ತು ಯಾರು ಹಣ ವಿತ್ ಡ್ರಾ ಮಾಡಬೇಡಿ. ನನ್ನ ರಾಜೀನಾಮೆಯಿಂದ ಇಟ್ಟಂಥ ಠೇವು ವಾಪಸ್ಸ ಪಡೆಯಬಾರದು ಎಂದು ಹೇಳಿದ್ದಾರೆ.