ದೇಶ

ಲಾರೆನ್ಸ್ ಬಿಷ್ಣೋಯ್ ಕಥೆ ಮುಗಿಸಿದ್ರೆ ಕೋಟಿ ರೂಪಾಯಿ ಬಹುಮಾನ- ಸುಪಾರಿ ಕೊಟ್ಟವರಾರು..?

ನವದೆಹಲಿ: ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ನನ್ಉ ಹತ್ಯೆ ಮಾಡಿದ್ರೆ 1,11,11,111ರೂಪಾಯಿ ನಗದು ಬಹುಮಾನವನ್ನು ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಬಹಿರಂಗವಾಗಿ ಘೋಷಣೆ ಮಾಡಿದೆ

ಸ್ನೇಹಿತರೇ ಕಳೆದ ವರ್ಷ ಡಿಸೆಂಬರ್ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ್ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ಈ ಬಹುಮಾನವನ್ನು ಘೋಷಿಸಿದ್ದಾನೆ..
ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಬಿಡುಗಡೆ ಮಾಡಿರುವ ರಾಜ್ ಶೇಖಾವತ್ ಜೈಲಿನಲ್ಲಿರುವ ದರೋಡೆಕೋರನನ್ನು ಕೊಂದ ಯಾವುದೇ ಪೊಲೀಸ್ ಅಧಿಕಾರಿಗೆ ಬಹುಮಾನವನ್ನು ನೀಡುತ್ತೇನೆ ಎಂದು ಹೇಳಿಕೊಂಡಿದ್ದಾನೆ..
ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಆರೋಪದಡಿ ಬಿಷ್ಣೋಯಿ ಪ್ರಸ್ತುತ ಗುಜರಾತ್ನ ಸಬರಮತಿ ಜೈಲಿನಲ್ಲಿದ್ದಾನೆ, ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಮಹಾರಾಷ್ಟ್ರದ ಮಾಜಿ ಸಚಿವ  ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ, ಅಲ್ಲದೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಬಿಷ್ಣೋಯ್ ಗ್ಯಾಂಗ್ಗೂ ಸಂಬಂಧ ಇರುವುದು ತನಿಖೆ ವೇಳೆಯಲ್ಲಿ ಬಯಲಾಗಿತ್ತು..