ತಂತ್ರಜ್ಞಾನ

ದೇಶ ಅಭಿವೃದ್ಧಿಯಾಗಬೇಕೆಂದರೆ ಅದು ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ಸಾಧ್ಯ: ಸಿಎಂ ಸಿದ್ದರಾಮಯ್ಯ

ಭಾರತೀಯ ವಿಜ್ಞಾನ ಸಂಸ್ಥೆಯ ಜೆಎನ್‌ ಟಾಟಾ ಸಭಾಂಗಣದಲ್ಲಿ ನಡೆದ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಎಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬೆಂಗಳೂರು: ದೇಶದ ಸರ್ವತೋಮುಖ ಪ್ರಗತಿಯಾಗಬೇಕೆಂದರೆ ಅದು ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ಸಾಧ್ಯ. ಹೀಗಾಗಿ ಯುವಪೀಳಿಗೆಯಲ್ಲಿ ತಂತ್ರಜ್ಞಾನ ಹಾಗೂ ವಿಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಎನ್‌ ಟಾಟಾ ಸಭಾಂಗಣದಲ್ಲಿ ನಡೆದ 2022 ಮತ್ತು 2023 ನೇ ಸಾಲಿನ ವಿಜ್ಞಾನಿ ಮತ್ತು ಎಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು. 

ಈ ರೀತಿ ಪ್ರಶಸ್ತಿ ಪ್ರದಾನ ಸಮಾರಂಭಗಳು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಬೇಕು. ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶವಾಗವೇಕು. ಭಾರತ ರತ್ನ ಸಿ.ಎನ್.ರಾವ್ ಅವರ ಸಾಧನೆ ಇಡಿ ಮನು ಕುಲದ ಹೆಮ್ಮೆ. ವಿಜ್ಞಾನದ ಬೆಳವಣಿಗೆಗೆ ಇವರ ತುಡಿತ ಶ್ಲಾಘನೀಯ. ಪ್ರತಿಭೆ ಯಾರ ಸ್ವತ್ತು ಅಲ್ಲ, ಅವಕಾಶ ಮತ್ತು ನಿರಂತರ ಶ್ರಮದಿಂದ ಪ್ರತಿಭೆ ವಿಸ್ತಾರಗೊಳ್ಳುತ್ತದೆ ಎಂದು ಹೇಳಿದರು. ನಮ್ಮ ರಾಜ್ಯ ವಿಜ್ಞಾನ-ತಂತ್ರಜ್ಞಾನ ಮತ್ತು ಸಂಶೋಧನೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈ ವಿಜ್ಞಾನ ತಂತ್ರಜ್ಞಾನದ ಫಲ ಜನ ಸಾಮಾನ್ಯರಿಗೆ ತಲುಪಬೇಕು ಎಂದರು.

ನಮ್ಮ ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಆಗಿದೆ ಎಂದರೆ ಇದರಲ್ಲಿ ಹಲವು ವಿಜ್ಞಾನಿಗಳ, ತಂತ್ರಜ್ಞರ ಕೊಡುಗೆ ಇದೆ. ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯವಾಗುತ್ತದೆ. ಸಮಾಜದ ತಾರತಮ್ಯ ಅಳಿಯಬೇಕಾದರೆ ಎಲ್ಲಾ ಜಾತಿ, ಧರ್ಮ, ವರ್ಗಗಳಿಗೆ ಸಮಾನ ಅವಕಾಶಗಳು‌ ಸಿಗುವಂತಾಗಬೇಕು ಎಂದರು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಭಾರತ ರತ್ನ ಪ್ರೊ.ಸಿಎನ್ಆರ್.ರಾವ್ ಕೂಡ ಉಪಸ್ಥಿತರಿದ್ದರು.