ವೈರಲ್

ಈಜಲು ತೆರಳಿದ್ದ ITI ವಿದ್ಯಾರ್ಥಿ ದಾರುಣ ಸಾವು

ಮೃತ ವಿದ್ಯಾರ್ಥಿ ವೆಂಕಟಾಚಲಪತಿ ಸರ್ಕಾರಿ ಬಾಲಕರ ವಸತಿನಿಲಯದ ವಿದ್ಯಾರ್ಥಿಯಾಗಿದ್ದ. ಕಾಲೇಜಿನಿಂದ ಹಾಸ್ಟೆಲ್‌ ಗೆ ಬಂದಿದ್ದ ವೆಂಕಟಾಚಲಪತಿ ಊಟ ಮುಗಿಸಿ ಹಾಸ್ಟೆಲ್ ಸಮೀಪವೇ ಇರುವ ಕಲ್ಯಾಣಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಚಿಕ್ಕಬಳ್ಳಾಪುರ : ಕೊಳವೆಯಲ್ಲಿ ಈಜಲು ಹೋಗಿ ITI ವಿದ್ಯಾರ್ಥಿ ಸಾವನ್ನಪ್ಪಿದ ದುರ್ಘಟನೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಹೊರವಲಯದ ಬಿಳಿಗಿರಿರಂಗನ ಕಲ್ಯಾಣಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವೆಂಕಟಾಚಲಪತಿ ಎಂದು ಗುರಿತಿಸಲಾಗಿದೆ.

ಮೃತ ವಿದ್ಯಾರ್ಥಿ ವೆಂಕಟಾಚಲಪತಿ ಸರ್ಕಾರಿ ಬಾಲಕರ ವಸತಿನಿಲಯದ ವಿದ್ಯಾರ್ಥಿಯಾಗಿದ್ದ. ಕಾಲೇಜಿನಿಂದ ಹಾಸ್ಟೆಲ್‌ ಗೆ ಬಂದಿದ್ದ ವೆಂಕಟಾಚಲಪತಿ ಊಟ ಮುಗಿಸಿ ಹಾಸ್ಟೆಲ್ ಸಮೀಪವೇ ಇರುವ ಕಲ್ಯಾಣಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ತಿಳಿದು ಜಿಲ್ಲಾಧಿಕಾರಿ ಪಿ. ಎನ್ ರವಿಂದ್ರ ಸಮೇತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಡೀ ರಾತ್ರಿ ಹುಡುಕಾಟ ನಡೆಸಿದ್ದು, ಮುಂಜಾನೆ ಮೃತದೇಹ ಪತ್ತೆಯಾಗಿದೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.