ಕರ್ನಾಟಕ

ಜೆಡಿಎಸ್ ಯುವ ಮುಖಂಡ ನಿಖಿಲ್​ ಕುಮಾರಸ್ವಾಮಿ ಅಖಾಡಕ್ಕೆ - ಚನ್ನಪಟ್ಟಣ ಬೈ ಎಲೆಕ್ಷನ್​ ರಂಗು

ಎನ್​ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್​ ಕುಮಾರಸ್ವಾಮಿ ಘೋಷಣೆ

ಬೆಂಗಳೂರು - ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಘೋಷಣೆ ಮಾಡಲಾಗಿದೆ. ಜೆಡಿಎಸ್ ಮುಖಂಡರೆ ಸಭೆ ಮುಗಿಸಿ ಮಾತನಾಡಿದ ಎಚ್.ಡಿ.ದೇವೇಗೌಡರು , ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ಭಾಗವಹಿಸಲಿದ್ದಾರೆ. ಇನ್ನು ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನಾನು ಖುದ್ದು ಭಾಗವಹಿಸುವೆ .ಜೊತೆಗೆ ಹೆಚ್ಚಿನ ಮಾಹಿತಿ ಬಿಜೆಪಿ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ನೀಡಲಿದ್ದಾರೆ ಎಂದರು. 

ದೋಸ್ತಿ ನಾಯಕರು ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ನಿವಾಸ ಡಾಲರ್ಸ್ ಕಾಲೋನಿ ದವಳಗಿರಿಯಲ್ಲಿ ಚರ್ಚೆ ನಡೆಸಿದರು.ಅಂತಿಮ ಸುತ್ತಿನ  ಮಾತುಕತೆ  ವೇಳೆ ಚನ್ನಪಟ್ಟಣ ಜೆಡಿಎಸ್ ಕ್ಷೇತ್ರವಾಗಿದು , ಬಿಜೆಪಿ ಕೊಟ್ಟ ಮಾತಿನಂತೆ ಎರಡು ಪಾರ್ಟಿಗಳಿಗೂ ಯಾವುದೇ ಡ್ಯಾಮೇಜ್ ಆಗದಂತೆ ಮಾತುಕತೆ ಮಾಡಲಾಯಿತು. 

ಜೆಡಿಎಸ್ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದು , ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಆಖಾಡಕ್ಕೆ ಇಳಿಸುವ ಪ್ರಸ್ತಾಪಕ್ಕೆ ದೋಸ್ತಿ ನಾಯಕರು ಒಪ್ಪಿಗೆ ಸೂಚಿಸಿದರು.ಈ ಹಿಂದೆ ಮಂಡ್ಯ ಕ್ಷೇತ್ರದಲ್ಲಿ ರಾಜಕೀಯ ಪರೀಕ್ಷೆಗೆ ಇಳಿದಿದ್ದ ನಿಖಿಲ್ ಕುಮಾರಸ್ವಾಮಿಗೆ ಸೋಲಾಗಿತು.  ಹಾಗೇ ರಾಮನಗರದಲ್ಲೂ ಚುನಾವಣೆ ಎದುರಿಸಿ ಸೋತಿದರು.