ಕರ್ನಾಟಕ

ದರ್ಶನ್ ರಾಜಾತಿಥ್ಯ ಫೋಟೋ ವೈರಲ್ ಹಿಂದೆ ಜೋಶಿ ಕೈವಾಡ ; ಸಂತೋಷ್ ಲಾಡ್..!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಫೋಟೋಗಳು ವೈರಲ್ ಆಗಿರುವ ವಿಚಾರದಲ್ಲಿ ಆರೋಪ ಮಾಡುತ್ತಿರುವ ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡ ಇರಬಹುದು. ಇಷ್ಟು ನಿಖರವಾಗಿ ಫೋಟೋ ಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ ಅಂದ್ರೆ ಅವರಿಗೆ ಮಾಹಿತಿ ಇರಬೇಕು ಎಂದು ಜೋಶಿ ವಿರುದ್ದ ಕುಟುಕಿದರು.

ಹುಬ್ಬಳ್ಳಿ :  ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆಗಿದ್ದವು. ಈ ವಿಚಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಈ ಬಗ್ಗೆ ಸಂತೋಷ್ ಲಾಡ್ ಅವರು ಮಾತಾನಾಡಿ, ದರ್ಶನ್ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಫೋಟೋಗಳು ವೈರಲ್ ಆಗಿರುವಹಿಂದೆ ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡ ಇರಬಹುದು ಎಂದು ಜೋಶಿಗೆ ತಿರುಗೇಟು ನೀಡಿದ್ಧಾರೆ. 

ಈ ಬಗ್ಗೆ  ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಫೋಟೋಗಳು ವೈರಲ್ ಆಗಿರುವ ವಿಚಾರದಲ್ಲಿ ಆರೋಪ ಮಾಡುತ್ತಿರುವ ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡ ಇರಬಹುದು. ಇಷ್ಟು ನಿಖರವಾಗಿ ಫೋಟೋ ಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ ಅಂದ್ರೆ ಅವರಿಗೆ ಮಾಹಿತಿ ಇರಬೇಕು ಎಂದು ಕುಟುಕಿದರು.