ಕರ್ನಾಟಕ

ಸಾಲಬಾಧೆ ತಾಳಲಾರದೆ ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿ ಸು*ಸೈಡ್..!

ಚಾರಿ ಖಾಸಗಿ ಸಂಸ್ಥೆಗಳಲ್ಲಿ ಸಾಲ ಮಾಡಿಕೊಂಡಿದ್ದು, ಹಿಂದಿರುಗಿಸಲು ಸಾಧ್ಯವಾಗದ ಕಾರಣ ಮನನೊಂದಿದ್ದನು. ಸಾಲ ನೀಡಿದವರು ಸಹ ಒತ್ತಡ ಹೇರುತ್ತಿದ್ದರು. ಇದರಿಂದ ಬೇಸತ್ತ ಕೃಷ್ಣಾಚಾರಿ, ಎಗ್ಗೆರೆ ಕೆರೆ ಮುಂದೆ ನಿಂತು ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿದ್ದಾರೆ

ಮೈಸೂರು : ಸಾಲಬಾಧೆಗೆ ಬೇಸತ್ತ ವ್ಯಕ್ತಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಮೈಸೂರಿನ ಪಿರಿಯಾಪಟ್ಟಣ  ತಾಲೂಕಿನ ಸುಂಡವಾಳು ಗ್ರಾಮದಲ್ಲಿ ಕೃಷ್ಣಾಚಾರಿ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣಾಚಾರಿ ಖಾಸಗಿ ಸಂಸ್ಥೆಗಳಲ್ಲಿ ಸಾಲ ಮಾಡಿಕೊಂಡಿದ್ದು, ಹಿಂದಿರುಗಿಸಲು ಸಾಧ್ಯವಾಗದ ಕಾರಣ ಮನನೊಂದಿದ್ದನು. ಸಾಲ ನೀಡಿದವರು ಸಹ ಒತ್ತಡ ಹೇರುತ್ತಿದ್ದರು. ಇದರಿಂದ ಬೇಸತ್ತ ಕೃಷ್ಣಾಚಾರಿ, ಎಗ್ಗೆರೆ ಕೆರೆ ಮುಂದೆ ನಿಂತು ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿದ್ದಾರೆ. ಕೆರೆ ಬಳಿ ಕೃಷ್ಣಾಚಾರಿಯ ಮೊಬೈಲ್ ಹಾಗೂ ಚಪ್ಪಲಿ ದೊರೆತಿದ್ದು, ತಾನು ಸಾಯುತ್ತಿರುವುದಾಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ನೇಹಿತರೊಬ್ಬರಿಗೂ ಸಹ ಮೊಬೈಲ್ ನಲ್ಲಿ ತಿಳಿಸಿದ್ದಾರೆಂದು ಹೇಳಲಾಗಿದೆ. ಕೃಷ್ಣಾಚಾರಿಗೆ ಒಟ್ಟು 20 ಲಕ್ಷ ಸಾಲ ಇತ್ತೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಸದ್ಯ ಪಿರಿಯಾಪಟ್ಟಣದ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.