ಕರ್ನಾಟಕ

ಸಿದ್ದರಾಮಯ್ಯ ಏನು ಸೈಟ್ ಬೇಕು ಅಂತಾ ಅರ್ಜಿ ಹಾಕಿದ್ರಾ; ಕೆಎನ್​ಆರ್

ರಾಜಕೀಯ ಅಧಿಕಾರವನ್ನ ದುರುಪಯೋಗ ಮಾಡಿಕೊಂಡು, ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ಬರುವಂತ ಕೆಲಸ ಮಾಡ್ತಿದ್ದಾರೆ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣ ಆರೋಪದ ಬಗ್ಗೆ, ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಏನು ಸೈಟ್ ಬೇಕು ಅಂತ ಅರ್ಜಿ ಹಾಕಿದ್ರಾ..? ಯಾರಿಗಾದ್ರೂ ಪೋನ್ ಮಾಡವ್ರಾ..? ರಾಜಕೀಯ ಅಧಿಕಾರವನ್ನ ದುರುಪಯೋಗ ಮಾಡಿಕೊಂಡು, ಸಿದ್ದರಾಮಯ್ಯ ಅವರಿಗೆ ಕೆಟ್ಟ ಹೆಸರು ಬರುವಂತ ಕೆಲಸ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅನ್ನ ಭಾಗ್ಯ ಯೋಜನ ತಂದವರು..ಹಸಿವಿನಿಂದ ಯಾರು ಮಲಗಬಾರದು ಅಂತಾ ಮಾಡಿದ್ರು ಎಂದು ಹೇಳಿದ್ದಾರೆ.