ಕರ್ನಾಟಕ

ನಿಖಿಲ್ ಕುಮಾರಸ್ವಾಮಿ ವಿರುದ್ಧ ಶಾಸಕ ಕದಲೂರು ಉದಯ್ ವಾಗ್ದಾಳಿ

ಕಾಂಗ್ರೆಸ್ 50 ಸಾವಿರ ಮತಗಳ ಅಂತರದಿಂದ ಗೆಲ್ತೇವೆ. ಕಾಂಗ್ರೆಸ್ ಬಡವರ ಪರ ಒಳ್ಳೆಯ ಕೆಲಸ ಮಾಡ್ತಿದೆ‌. ಡಿಸಿಎಂ ಡಿ.ಕೆ.ಶಿವಕುಮಾರ್ ಸಾವಿರಾರು ಕೋಟಿ ಅನುದಾನ ಕೊಟ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಯೋಗೇಶ್ವರ್ ನೀರು ಕೊಡುವ ಕೆಲಸ ಮಾಡಿದ್ದಾರೆ.

ಮಂಡ್ಯ : ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಿರೋದು ಪೂರ್ವ ನಿಯೋಜಿತ. ಜನರ ಹತ್ತಿರ ಅನುಕಂಪ ಗಿಟ್ಟಿಸಿಕೊಳ್ಳಲು ದೊಂಬರಾಟ ಆಡಿದ್ದು ಜನರಿಗೆ ಗೊತ್ತಿದೆ ಎಂದು ಜೆಡಿಎಸ್ ವಿರುದ್ಧ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮದ್ದೂರಿನಲ್ಲಿ ಶಾಸಕ ಕದಲೂರು ಉದಯ್  ಅವರು ಮಾತನಾಡಿ, ಕಾಂಗ್ರೆಸ್ 50 ಸಾವಿರ ಮತಗಳ ಅಂತರದಿಂದ ಗೆಲ್ತೇವೆ. ಕಾಂಗ್ರೆಸ್ ಬಡವರ ಪರ ಒಳ್ಳೆಯ ಕೆಲಸ ಮಾಡ್ತಿದೆ‌. ಡಿಸಿಎಂ ಡಿ.ಕೆ.ಶಿವಕುಮಾರ್ ಸಾವಿರಾರು ಕೋಟಿ ಅನುದಾನ ಕೊಟ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಯೋಗೇಶ್ವರ್ ನೀರು ಕೊಡುವ ಕೆಲಸ ಮಾಡಿದ್ದಾರೆ. ಜನರು ಕಾಂಗ್ರೆಸ್ ಗೆ ಆಶೀರ್ವಾದ ಮಾಡಿ ಗೆಲ್ಲಿಸ್ತಾರೆ. ಮೈತ್ರಿ ಬಗ್ಗೆ ನಮಗೆ ಆತಂಕ ಇಲ್ಲ. ಜನರು ನಮ್ಮ ಪರ ಇದ್ದಾರೆ, ನಾವು ಚುನಾವಣೆ ಗೆಲ್ತೇವೆ. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಿರೋದು ಪೂರ್ವ ನಿಯೋಜಿತ. ಜನರ ಹತ್ತಿರ ಅನುಕಂಪ ಗಿಟ್ಟಿಸಿಕೊಳ್ಳಲು ದೊಂಬರಾಟ ಆಡ್ತಿದ್ದಾರೆ‌. ಬಹಳಷ್ಟು ಜನರಿಗೆ ಇವರ ದೊಂಬರಾಟ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.