ವೈರಲ್

ಪ್ರೀಯತಮನಿಗಾಗಿ ತಾನೇ ಜನ್ಮ ನೀಡಿದ ಮಕ್ಕಳನ್ನ ಕೊಂದ ಪಾಪಿ ತಾಯಿ..!

15 ದಿನಗಳ ಅಂತರದಲ್ಲಿ ಎರಡು ಮಕ್ಕಳು ಸಾವನ್ನಪ್ಪಿದ್ದು, ಅದೇ ತಂದೆ ತಾಯಿ ಬಂದು ಮಕ್ಕಳನ್ನು ದಫನ್ ಮಾಡಿದ್ದ ಬಗ್ಗೆ ಸ್ಮಶಾನದ ಸಿಬ್ಬಂದಿಗೆ ಅನುಮಾನ ಬಂದಿದೆ.

ರಾಮನಗರ: ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾರೆಂದು ಹೆತ್ತ ತಾಯಿಯೇ ಮಕ್ಕಳನ್ನ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

 ಈಕೆ ಮೂಲತಃ ಬೆಂಗಳೂರು ನಗರದ ಎ.ಕೆ. ಕಾಲೋನಿ ನಿವಾಸಿಯಾಗಿದ್ದಳು. ಆದರೆ, ಪ್ರಿಯಕರನ ಮೋಹಕ್ಕೆ ಒಳಗಾಗಿದ್ದ ಈಕೆ ಗಂಡನನ್ನು ಬಿಟ್ಟು ತನ್ನ ಎರಡು ಮಕ್ಕಳೊಂದಿಗೆ ಪ್ರಿಯಕರ ಗ್ರೆಗೋರಿ ಫ್ರಾನ್ಸಿಸ್ (27) ನೊಂದಿಗೆ ರಾಮನಗರಕ್ಕೆ ಬಂದು ಮಂಜುನಾಥ ನಗರದಲ್ಲಿ ವಾಸವಿದ್ದರು. ಇಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಆದರೆ, ದಿನ ಕಳೆಯುತ್ತಿದ್ದಂತೆ ಬೇರೆಯವನ ಮಕ್ಕಳನ್ನು ಪ್ರೀತಿಯಿಂದ ಕಾಣದೇ ಪ್ರಿಯಕರ ಗ್ರೆಗೋರಿ ಫ್ರಾನ್ಸಿಸ್ ಮಕ್ಕಳ ಮೇಲೆ ಹಲ್ಲೆ ಮಾಡುತ್ತಿದ್ದ. ಜೊತೆಗೆ ಇದರ ಮದ್ಯದಲ್ಲಿ ಮಕ್ಕಳಿಗೆ ಅನಾರೋಗ್ಯ ಉಂಟಾದಾಗ ಅವುಗಳನ್ನು ಕಾಳಜಿ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾದರೆ ನಾವಿಬ್ಬರೂ ಅಕ್ರಮ ಸಂಬಂಧಕ್ಕಾಗಿ ಊರು ಬಿಟ್ಟು ಬಂದರೂ ಏನೂ ಫಲಬವಿಲ್ಲ ಎಂದು, ಮೊದಲು ದೊಡ್ಡ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಈ ಮಗುವನ್ನು ರಾಮನಗರದ ಸ್ಮಶಾನದಲ್ಲಿ ಹೋಗಿ ದಫನ್ ಮಾಡಿ ಬಂದಿದ್ದಾರೆ.

ಇದಾದ ನಂತರ ಇವರ ಸಂಬಂಧಕ್ಕೆ 2 ವರ್ಷದ ಮಗುವನ್ನು ಕೂಡ ಸಾಯಿಸಿದ್ದಾರೆ. ನಂತರ ಸ್ಮಶಾನದಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದೆ ಎಂದು ಹೇಳಿ ದಫನ್ ಮಾಡಿ ಬಂದಿದ್ದಾರೆ.

15 ದಿನಗಳ ಅಂತರದಲ್ಲಿ ಎರಡು ಮಕ್ಕಳು ಸಾವನ್ನಪ್ಪಿದ್ದು, ಅದೇ ತಂದೆ ತಾಯಿ ಬಂದು ಮಕ್ಕಳನ್ನು ದಫನ್ ಮಾಡಿದ್ದ ಬಗ್ಗೆ ಸ್ಮಶಾನದ ಸಿಬ್ಬಂದಿಗೆ ಅನುಮಾನ ಬಂದಿದೆ. ಆಗ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾನೆ. ಸ್ಮಶಾನದ ಕಾವಲುಗಾರನ ದೂರನ್ನು ಆಧರಿಸಿ ಐಜೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಮಕ್ಕಳನ್ನು ದಫನ್ ಮಾಡಿಹೋದ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ನಂತರ, ಮಕ್ಕಳ ಸಾವಿನ ಬಗ್ಗೆ ವಿಚಾರಣೆ ಮಾಡಿದಾಗ, ಮೊದಲು ಅನಾರೋಗ್ಯದಿಂದ ಸಾವು ಎಂದು ಹೇಳಿದ್ದಾರೆ. ಆದರೆ ಪೊಲೀಸರ ಸ್ಟೈಲ್‌ನಲ್ಲಿ ವಿಚಾರಣೆ ಮಾಡಿದಾಗ ಸತ್ಯವನ್ನು ಒಪ್ಪಿಕೊಂಡು ತಾನೇ ತನ್ನಿಬ್ಬರು ಮಕ್ಕಳನ್ನು ಪ್ರಿಯಕರನೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದಾಗಿ ಹೇಳಿದ್ದಾಳೆ.