ಕರ್ನಾಟಕ

ಪಕ್ಷದ ಉಳಿವಿಗಾಗಿ ನಿಖಿಲ್ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು: ಸಾ.ರಾ ಮಹೇಶ್

ಬೆಂಗಳೂರು: ಪಕ್ಷದ ಉಳಿವಿಗಾಗಿ ನಿಖಿಲ್ ಕುಮಾರಸ್ವಾಮಿಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಮನವಿ

ಸ್ನೇಹಿತರೇ ಚನ್ನಪಟ್ಟಣ ಅಭ್ಯರ್ಥಿ ಕುರಿತು ಜೆಪಿ ಭವನದಲ್ಲಿ ಮಾತನಾಡಿದ ಅವರು, ಚನ್ನಚನ್ನಪಟ್ಟಣದಿಂದ ನಿಖಿಲ್ ನಿಲ್ಲಬೇಕು ಎಂದು ಕಾರ್ಯಕರ್ತರು, ಮುಖಂಡರು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಿಖಿಲ್ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಹೇಳುತ್ತಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ನಿಖಿಲ್ ಜೊತೆ ಮಾತನಾಡುತ್ತಿದ್ದಾರೆ. ಎಲ್ಲರು ನಿಖಿಲ್ ಅಭ್ಯರ್ಥಿ ಆಗಬೇಕು ಎಂದು ಹೇಳುತ್ತಿದ್ದಾರೆ. ಇವತ್ತು ಕುಮಾರಸ್ವಾಮಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.