ಬೆಂಗಳೂರು : ನಮ್ಮ NDA ಸಂಬಂಧಕ್ಕೆ ಯಾವುದೇ ಚ್ಯುತಿ ಬರಬಾರದು. ನಮ್ಮಿಂದ ಯಾವುದೇ ಪ್ರಶ್ನೆ ಎದುರಾಗಬಾರದು. NDA ಸಂಬಂಧಕ್ಕೆ ಧಕ್ಕೆ ಬರಬಾರದು. ಯಾವುದೇ ಉದ್ವೇಗಕ್ಕೆ ಒಳಗಾಗಿ ಸಾವರ್ಜನಿಕ ಚರ್ಚೆಗೆ ತೀರ್ಮಾನ ಮಾಡಬಾರದು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಇವತ್ತು ಸೋಲು ಗೆಲವು ನಿರ್ಧಾರ ಮಾಡೋದು ಜನರು. ಚನ್ನಪಟ್ಟಣದಲ್ಲಿ ಯಾವ ರೀತಿ ರಾಜಕೀಯವಾಗಿ ಬೆಳವಣಿಗೆ ಆಗುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಅಲ್ಲಿನ ಜನರು ಪ್ರಬುದ್ದರಿದ್ದಾರೆ. 13ನೇ ತಾರೀಖು ಅವರು ನಿರ್ಧಾರ ಮಾಡುತ್ತಾರೆ ಎಂದರು.
ದೇವೇಗೌಡರು ಕರೆ ಮಾಡಿದ್ದರು, ಇಂದಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ದೇವೇಗೌಡರು ಹೇಳಿದ್ದು ಒಂದೇ. ಲೋಕಸಭೆ ಚುನಾವಣೆ ಸಮಯದಲ್ಲಿ NDA ಮೈತ್ರಿ ಮಾಡಿಕೊಂಡ ತೀರ್ಮಾನಕ್ಕೆ ರಾಜ್ಯದ ಜನತೆ ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಗೆ ಆರ್ಶೀವಾದ ಮಾಡಿದ್ದಾರೆ ಎಂದರು. ಚನ್ನಪಟ್ಟಣ ತಾಲೂಕಿನ ಜೆಡಿಎಸ್ ಅಧ್ಯಕ್ಷ ಜಯಮುತ್ತು ಈ ಸಂದರ್ಭದಲ್ಲಿ ನಿಖಿಲ್ ಅವರ ಜತೆಯಲ್ಲಿ ಇದ್ದರು ಎಂದು ಹೇಳಿದರು.