ಕರ್ನಾಟಕ

ಚಿಕ್ಕೋಡಿ! ದೇವಸ್ಥಾನಕ್ಕೆ ಹೋಗಿದ್ದಾಗ ನೀರು ಪಾಲಾಗಿ ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಮಸೂಬಾ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ವ್ಯಕ್ತಿ ಸಾವನ್ನಪ್ಪಿದ್ದು, ಗುರುರಾಜ್ ಈರಪ್ಪ ಯಾದವಾಡ (75) ಮೃತ ದುರ್ದೈವಿಯಾಗಿದ್ದಾರೆ. ಮೃತ ದುರ್ದೈವಿ ಅಥಣಿ ಪಟ್ಟಣದ ಜೇರೆ ಗಲ್ಲಿ ನಿವಾಸಿಯಾಗಿದ್ದಾರೆ. ಈ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿಂದೆ.

ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದ ಅಥಣಿಯಲ್ಲಿ ಮಳೆ ಅವಾಂತರಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ನಿನ್ನೆ ‌ಸುರಿದ ಧಾರಾಕಾರ ಮಳೆಗೆ ಹಳ್ಳಿಗಳು ತುಂಬಿ ಹರಿದಿವೆ. ಇಂದು ಬೆಳಗ್ಗಿನ ಜಾವ ದೇವರ ದರ್ಶನಕ್ಕೆ ಹೋಗುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವನ್ನಪ್ಪಿದ್ಧಾರೆ.

ಈ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಮಸೂಬಾ ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ವ್ಯಕ್ತಿ ಸಾವನ್ನಪ್ಪಿದ್ದು, ಗುರುರಾಜ್ ಈರಪ್ಪ ಯಾದವಾಡ (75) ಮೃತ ದುರ್ದೈವಿಯಾಗಿದ್ದಾರೆ. ಮೃತ ದುರ್ದೈವಿ ಅಥಣಿ ಪಟ್ಟಣದ ಜೇರೆ ಗಲ್ಲಿ ನಿವಾಸಿಯಾಗಿದ್ದಾರೆ. ಈ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿಂದೆ.