ನವದೆಹಲಿ, ಸೆ.12: ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದರು. ಈ ಬೆನ್ನಲ್ಲೇ ಭಾರತದ ನ್ಯಾಯಾಂಗ ಸ್ವಾತಂತ್ರ್ಯದ ಬಗ್ಗೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದ ಮುಖ್ಯ ನ್ಯಾಯಾಧೀಶರು ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರಗಳ ಪ್ರತ್ಯೇಕತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ. ಸಿಜೆಐ ಸ್ವಾತಂತ್ರ್ಯದ ಮೇಲಿನ ಎಲ್ಲ ವಿಶ್ವಾಸವನ್ನು ಕಳೆದುಕೊಂಡರು. ಕಾರ್ಯನಿರ್ವಾಹಕರಿಂದ ಸಿಜೆಐ ಅವರ ಸ್ವಾತಂತ್ರ್ಯವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ ರಾಜಿ ಯನ್ನು ಖಂಡಿಸಲು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಜೈಸಿಂಗ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ ಕರೆ ನೀಡಿದರು. ಜೈಸಿಂಗ್ ತಮ್ಮ ಪೋಸ್ಟ್ನಲ್ಲಿ ಎಸ್ಸಿಬಿಎ ಅಧ್ಯಕ್ಷ ಕಪಿಲ್ ಸಿಬಲ್ ಅವರನ್ನೂ ಟ್ಯಾಗ್ ಮಾಡಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ.
ಪ್ರಧಾನಿ ಮೋದಿ ಅವರು ಬುಧವಾರದಂದು ಸಿಜೆಐ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದರು. ನರೇಂದ್ರ ಮೋದಿಯವರನ್ನ ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರು ತಮ್ಮ ನಿವಾಸಕ್ಕೆ ಸ್ವಾಗತಿಸಿದ್ದು, ಸಂಭ್ರಮಾಚರಣೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಸಾಂಪ್ರದಾಯಿಕ ಟೋಪಿಯನ್ನು ಧರಿಸಿ ಮೋದಿ ಅವರು ಪೂಜೆ ಸಲ್ಲಿಸುತ್ತಿದ್ದರು. ಈ ಸಂಬಂಧ ಜೈ ಸಿಂಗ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಇಂದಿರಾ ಜೈಸಿಂಗ್ ಆಕ್ರೋಶ ಹೊರಹಾಕಿದ್ದಾರೆ.