ದೇಶ

ಪೊದೆಯಲ್ಲಿ ಎಸೆದು ಹೋಗಿದ್ದ ಮಗುವನ್ನು ದತ್ತು ಪಡೆದು ಮಾನವೀಯತೆ ಮೆರೆದ ಪೊಲೀಸ್.. ಹ್ಯಾಟ್ಸಾಪ್ ಎಂದ ನೆಟ್ಟಿಗರು

ಯಾರು ಇದು ನಮ್ಮ ಮಗು ಎಂದು ಹೇಳಿಕೊಳ್ಳಲು ಸಿದ್ಧರಿರಲಿಲ್ಲ. ಇದೇ ವೇಳೆ ಸಬ್‌ ಇನ್ಸ್‌ ಪೆಕ್ಟರ್‌ ಪುಷ್ಪೆಂದ್ರ ಸಿಂಗ್ ಮತ್ತು ಅವರ ಪತ್ನಿ ರಾಶಿ ಅವರು ಈ ಮಗುವನ್ನು ದತ್ತು ಪಡೆಯಲು ಮುಂದಾದರು. ಹೀಗಾಗಿ ಹೆತ್ತವರಿಗೆ ಬೇಡವಾದ ಮಗುವೊಂದಕ್ಕೆ ಈಗ ಸುಂದರವಾದ ಬದುಕು ಸಿಕ್ಕಿದ್ದು, ಪುಷ್ಪೇಂದ್ರ ಸಿಂಗ್ ಕಾರ್ಯಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗಿದೆ.

ಹೆಣ್ಣು ಮಗು ಹುಟ್ಟಿತೆಂದು ಹೆತ್ತವರೇ ಮಗುವನ್ನ ಪೊದೆಯಲ್ಲಿ ಬಿಟ್ಟು ಹೋಗಿದ್ದರು. ಪೊದೆಗೆ ಎಸೆದ ಮಗುವೊಂದನ್ನು ಇನ್ಸ್‌ ಪೆಕ್ಟರ್‌ ಒಬ್ಬರು ದತ್ತು ಪಡೆದು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ ನಲ್ಲಿ ನಡೆದಿದೆ. 

ಪೋಷಕರು ಎಸೆದು ಹೋದ ಮಗುವನ್ನು ದತ್ತು ಪಡೆದ ಸಬ್ ಇನ್ಸ್‌ಪೆಕ್ಟರ್

ಹೌದು, ಈ ವೇಳೆ ಮಗುವಿನ ಪೋಷಕರು ಯಾರಿರಬಹುದು ಎಂದು ತಿಳಿಯಲು ಹಲವು ಪ್ರಯತ್ನ ಮಾಡಿದರಾದರು ಯಾವುದೇ ಪ್ರಯೋಜನವಾಗಲಿಲ್ಲ, ಯಾರು ಇದು ನಮ್ಮ ಮಗು ಎಂದು ಹೇಳಿಕೊಳ್ಳಲು ಸಿದ್ಧರಿರಲಿಲ್ಲ. ಇದೇ ವೇಳೆ ಸಬ್‌ ಇನ್ಸ್‌ ಪೆಕ್ಟರ್‌ ಪುಷ್ಪೆಂದ್ರ ಸಿಂಗ್ ಮತ್ತು ಅವರ ಪತ್ನಿ ರಾಶಿ ಅವರು ಈ ಮಗುವನ್ನು ದತ್ತು ಪಡೆಯಲು ಮುಂದಾದರು.  ಹೀಗಾಗಿ ಹೆತ್ತವರಿಗೆ ಬೇಡವಾದ ಮಗುವೊಂದಕ್ಕೆ ಈಗ ಸುಂದರವಾದ ಬದುಕು ಸಿಕ್ಕಿದ್ದು, ಪುಷ್ಪೇಂದ್ರ ಸಿಂಗ್ ಕಾರ್ಯಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗಿದೆ.

ಇನ್ಸ್‌ ಪೆಕ್ಟರ್‌ ಪುಷ್ಪೇಂದ್ರ ಸಿಂಗ್  ದಂಪತಿಗಳು 2018ರಲ್ಲಿ ಮದುವೆಯಾಗಿದ್ದು, ಅವರಿಗೆ ಮಕ್ಕಳಿರಲಿಲ್ಲ, ಮಗುವಿನ ಈ ಆಗಮನವನ್ನು ದೇವರ ಆಶೀರ್ವಾದವೆಂದು ದಂಪತಿ ಬಣ್ಣಿಸಿದ್ದಾರೆ. ಹಾಗೆಯೇ ದತ್ತು ತೆಗೆದುಕೊಳ್ಳಲು ಬೇಕಾದ ಎಲ್ಲಾ ಪ್ರಕ್ರಿಯೆಗಳನ್ನು ಇವರು ಮಾಡಿದ್ದಾರೆ ಎಂದು ಇನ್ಸ್‌ ಪೆಕ್ಟರ್ ಅಂಕಿತ್ ಚೌಹಾಣ್ ಅವರು ಖಚಿತಪಡಿಸಿದ್ದಾರೆ. ಪ್ರಸ್ತುತ ಈ ಮಗು ಪುಷ್ಪೆಂದ್ರ ಸಿಂಗ್ ದಂಪತಿಯ ಆರೈಕೆಯಲ್ಲಿದೆ ಎಂದು ತಿಳಿದು ಬಂದಿದೆ. ಪುಷ್ಪೆಂದ್ರ ಹಾಗೂ ಪತ್ನಿ ಇಬ್ಬರು ಮಗು ದತ್ತು ಪಡೆಯಲು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲು ಕಾತುರದಿಂದ ಕಾಯುತ್ತಿದ್ದು, ಇದು ತಮ್ಮ ಮಗುವೆಂದು ಅಧಿಕೃತವಾಗಿ ಹೇಳಿಕೊಳ್ಳಲು ಉತ್ಸಾಹಿತರಾಗಿದ್ದಾರೆ.