ವೈರಲ್

ರಥಕ್ಕೆ ಹೊದಿಕೆ ಹಾಕುಲು ಹೋಗಿ ಮೇಲಿಂದ ಬಿದ್ದು ಪೂಜಾರಿ ಸಾವು!

ಶ್ರಾವಣದಲ್ಲಿ ರಥೋತ್ಸವ ಮುಗಿದು ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುತ್ತಿದ್ದ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ ಮೃತಪಟ್ಟ ಘಟನೆ ನಡೆದಿದೆ.

ರಬಕವಿ: ಕೆಲ ದಿನಗಳ ಹಿಂದೆಯಷ್ಟೇ ಶ್ರಾವಣಮಾಸ ಮುಗಿದಿದೆ. ಶ್ರಾವಣದಲ್ಲಿ ರಥೋತ್ಸವ ಮುಗಿದು ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುತ್ತಿದ್ದ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ಬಾಗಲಕೋಟೆ ಜಿಲ್ಲೆಯ ರಬಕವಿ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ, ತಿಪ್ಪಯ್ಯ ಗಿರಿಮಲ್ಲಯ್ಯ  (53)  ಮೃತಪಟ್ಟ ಘಟನೆ  ನಡೆದಿದೆ.

ಶ್ರೀಮಲ್ಲಿಕಾರ್ಜುನ ದೇವಸ್ಥಾನದ ರಥೋತ್ಸವ ಶ್ರಾವಣ ಮಾಸದಲ್ಲಿ ಪೂರ್ಣಗೊಂಡಿತ್ತು. ಹೀಗಾಗಿ ರಥ ಪ್ರತಿವರ್ಷ ನಿಲ್ಲುವ ಸ್ಥಳದಲ್ಲೇ ನಿಂತಿತ್ತು. ಹೀಗಾಗಿ ರಥ ಧೂಳು ಹಿಡಿಯಬಾರದು ಎಂಬ ಕಾರಣಕ್ಕೆ ರಥಕ್ಕೆ ಮೇಲು ವಸ್ತ್ರ ಹೊದಿಕೆ ಹೊದಿಸಲಾಗುತ್ತದೆ. ಅದೇ ರೀತಿ ಈ ವರ್ಷ ಪೂಜಾರಿಗಳು ರಥದ ಮೇಲೆ ಹತ್ತಿ ಹೊದಿಕೆ ಹಾಕುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ತೇರದಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.