ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-8 ಆರೋಪಿಯಾಗಿದ್ದ ರವಿಶಂಕರ್ ಗೆ 57 ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-8 ಆರೋಪಿಯಾಗಿರುವ ಚಿತ್ರದುರ್ಗ ಮೂಲದ ರವಿಶಂಕರ್ ಸದ್ಯ ತುಮಕೂರು ಜಿಲ್ಲಾ ಕಾರಾಗೃಹದಲ್ಲಿದ್ದಾರೆ. ಆರೋಪಿ ರವಿಶಂಕರ್ ಗೆ ಜಾಮೀನೂ ಮಂಜೂರಾದ ಹಿನ್ನಲೆ ಜಾಮೀನಿನ ಕಾನೂನು ಪ್ರಕ್ರಿಯೆ ಮುಗಿದ ಬಳಿಕ, ಇಂದು ಸಂಜೆ ರವಿಶಂಕರ್ ಬಿಡುಗಡೆಯಾಗುವ ಸಾಧ್ಯತೆ ಇದೆ.