ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಪರ ಹಿರಿಯ ವಕಿಲ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ದೊರೆತಿದ್ದು, ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ ಮೊರೆ ಹೋಗಿದ್ದರು. ಮುಂದಿನ ತಿಂಗಳು ಈ ಅರ್ಜಿಯ ವಿಚಾರಣೆ ನಡೆಯಲಿದ್ದು, ದರ್ಶನ್ ಅವರ ಕಾನೂನು ತಂಡ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಸಂಪರ್ಕಿಸಿದೆ ಎನ್ನಲಾಗಿದೆ.
ಮಾರ್ಚ್ 18ರಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದ್ದು, ದರ್ಶನ್ ಕುಟುಂಬದವರು ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿ ಎನ್ನಲಾಗುತ್ತಿದೆ.