ಕರ್ನಾಟಕ
ಸಿಎಂ ತವರು ಜಿಲ್ಲೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡುವ ಅಕ್ಕಿಗೆ ಕನ್ನ ..!
ಶಾಲೆಗಳಿಗೆ ವಿತರಿಸುವ ಅಕ್ಕಿಗಳಿಗೆ ಖದೀಮರು ಕನ್ನ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆಯಾದ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ.
ಮೈಸೂರು: ಶಾಲೆಗಳಿಗೆ ವಿತರಿಸುವ ಅಕ್ಕಿಗಳಿಗೆ ಖದೀಮರು ಕನ್ನ ಹಾಕಿರುವ ಘಟನೆ ಸಿಎಂ ತವರು ಜಿಲ್ಲೆಯಾದ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನ ಎಪಿಎಂಸಿ ಗೋಡನ್ನಲ್ಲಿ ಬರೋಬ್ಬರಿ 400 ಕ್ವಿಂಟಾಲ್ ಅಕ್ಕಿಯನ್ನ ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಬನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಗೆ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.