ಮೈಸೂರು : ಮೈಸೂರಿನ ಕಲ್ಯಾಣಗಿರಿ ಬಡಾವಣೆಯಲ್ಲಿರುವ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಪುಂಡ ಮುಸ್ಲಿಂರು ನಿನ್ನೆ ಅಕ್ರಮಣ ಮಾಡಿದ್ದು, ಮೈಸೂರಿನಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪೊಲೀಸರನ್ನೆ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ ಆಗುತ್ತಿದ್ದು, ಈಗಲೂ ಅದೇ ಮುಂದುವರಿದಿದೆ. ಟಿಪ್ಪು ಸಂತತಿ ಅವರು ಮಾಡಿರುವ ಗಲಾಟೆ ಇದು. ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಅವರದು ಕನ್ನಡಿಗರ ಸರ್ಕಾರ ಅಲ್ಲ. ಇದು ತಾಲಿಬಾನಿ ಸರ್ಕಾರ. ಚುನಾವಣೆ ಸಂದರ್ಭದಲ್ಲೇ ಹೇಳಿದ್ವಿ ಇದು ತಾಲಿಬಾನಿ ಸರ್ಕಾರ ಆಗುತ್ತೆ ಅಂತಾ. ಪೊಲೀಸರು ಆಳುವ ಸರ್ಕಾರದ ಅಣತಿಯಂತೆ ನಡೆಯುವುದು ಮೊದಲು ಬಿಡಬೇಕು. ಪುಂಡ ಮುಸ್ಲಿಂರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಾರೆ. ಅದಕ್ಕೇ ಈ ರೀತಿ ಗಲಾಟೆಯಾಗಿದೆ. ಅರವಿಂದ್ ಕೇಜ್ರಿವಾಲ್ ಸೋತರೆ ಉದಯಗಿರಿ ಮುಸ್ಲಿಂರಿಗೆ ಯಾಕೆ ರೋಷ ಬರುತ್ತೆ? ಅವರ ಮನೆಯಲ್ಲಿ ಯಾಕೆ ಸೂತಕ ಬರುತ್ತೆ? ಪುಂಡಾ ಮುಸ್ಲಿಂರಿಗೆ ಬುದ್ದಿ ಕಲಿಸಿ. ಉದಯಗಿರಿ ವ್ಯಾಪ್ತಿಯಲ್ಲಿ ಪೊಲೀಸರು ಕೂಬಿಂಗ್ ಮಾಡಬೇಕು. ಸಿದ್ದರಾಮಯ್ಯ ಅವರು ಎಷ್ಟು ದಿನ ಸಿಎಂಆಗಿರ್ತಾರೋ ಗೊತ್ತಿಲ್ಲ. ಆದರೆ ಈಗಲಾದರೂ ಖಡಕ್ಆಗಿ ಕೆಲಸ ಮಾಡಲಿ. ಸಿದ್ದರಾಮಯ್ಯ ಎಷ್ಟು ಅಸಮರ್ಥ ಸಿಎಂ ಎಂಬುದಕ್ಕೆ ಅವರ ತವರೂರಿನಲ್ಲಿ ನಡೆದ ಈ ಘಟನೆ ಸಾಕ್ಷಿ ಎಂದು ಹರಿಹಾಯ್ದಿದ್ದಾರೆ.