ಸಿಎಂ ಸಿದ್ದರಾಮಯ್ಯಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ.. ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದಾರೆ.. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ.. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.. ಎರಡು ದಿನ ಪ್ರಯಾಣ ಮಾಡದೇ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ..