ಕರ್ನಾಟಕ

ಹೆಂಡತಿ ಜೊತೆ ಸೇರಿ ಹೆತ್ತಮ್ಮನನ್ನೇ ಕೊಂದನಾ ಮಗ..?

ಮಹಿಳೆ ಸಾವನ್ನಪ್ಪಿದ್ದು ಅವರ ಮಗ-ಸೊಸೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ತುಮಕೂರಿನ ಶಿರವರ ಗ್ರಾಮದ ಬಳಿ ಇರುವ, ಕಲ್ಲುಪಾಳ್ಯದಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಪ್ರಕರಣ ಸಂಬಂಧ ಸೊಸೆ ಹಾಗೂ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 57 ವರ್ಷದ ಕೆಂಪಮ್ಮ ಮೃತ ದುರ್ದೈವಿಯಾಗಿದ್ದು, ಸೊಸೆ ಉಮಾದೇವಿ ಪುತ್ರ ರಾಜೇಶ್ ನ ಪೊಲೀಸರು ಬಂಧಿಸಿದ್ದಾರೆ.

ಕೆಂಪಮ್ಮಗೆ ಸೊಸೆ ಉಮಾದೇವಿ ನಿರಂತರವಾಗಿ ಕಿರುಕುಳ ಕೊಟ್ಟು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಇಂದು ಬೆಳಗ್ಗೆ ಕೆಂಪಮ್ಮ ಸಾವನ್ನಪ್ಪಿದ್ದು, ಇದು ಸಹಜ ಸಾವಲ್ಲ ಕೊಲೆ ಎಂದು ಕೆಂಪಮ್ಮನ ಪುತ್ರಿ ದೂರು ನೀಡಿದ್ದರು. ಇದರ ಆಧಾರದ ಮೇಲೆ ಮಗ-ಸೊಸೆ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯನ್ನು ಮೃತ ಕೆಂಪಮ್ಮಗೆ ಹಲ್ಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹೆಬ್ಬೂರು ಪೊಲೀಸರಿಂದ ತನಿಖೆ ಮುಂದುವರೆದಿದೆ.