ದೇಶ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; 10 ಮಂದಿ ಸಾವು?

ಮೌನಿ ಅಮವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಸಾಗರೋಪಾದಿಲ್ಲಿ ಹರಿದು ಬಂದಿದ್ದು, ಈ ವೇಳೆ ಪ್ರಯಾಗ್‌ ರಾಜ್‌ನ ಸಂಗಮ್‌ ಘಾಟ್‌ನಲ್ಲಿ ಕಾಲ್ತುಳಿತ ಸಂಭವಿಸಿದೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಮೌನಿ ಅಮವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಭಕ್ತರು ಸಾಗರೋಪಾದಿಲ್ಲಿ ಹರಿದು ಬಂದಿದ್ದು, ಈ ವೇಳೆ ಪ್ರಯಾಗ್‌ ರಾಜ್‌ನ ಸಂಗಮ್‌ ಘಾಟ್‌ನಲ್ಲಿ ಕಾಲ್ತುಳಿತ ಸಂಭವಿಸಿದೆ. 

ಕಾಲ್ತುಳಿತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆಯನ್ನ ನೀಡಲಾಗಿದೆ.