ಟಿಕೆಟ್ ವಂಚಿತ ಸಿ.ಪಿ.ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬೆನ್ನಲ್ಲೇ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿಯ ಇನ್ನೂ 8 ಜನ ಶಾಸಕರು ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಬೆಂಗಳೂರಿನ ಇಬ್ಬರು ಎಂಎಲ್ಎ ಗಳು ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಮಾಧ್ಯಮವೊಂದರ ಜೊತೆ ಸಿ.ಪಿ.ಯೋಗೇಶ್ವರ್ ಅವರ ಪಕ್ಷಾಂತರ ಪರ್ವದ ಬಗ್ಗೆ ಮಾತನಾಡುವ ವೇಳೆ, 8 ಜನ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ತಿಳಿಸಿದ್ದಾರೆ.