ವೈರಲ್

ಮಂಡ್ಯದಲ್ಲಿ ಉಲ್ಬಣಿಸಿದ ಕಬ್ಬು ಕಟಾವು ಸಮಸ್ಯೆ.? ಜಿಲ್ಲಾಡಳಿತದ ಮಾಸ್ಟರ್​ ಪ್ಲಾನ್​ ಏನು?

ಸಾಮಾಜಿಕ ಜಾಲತಾಣದಲ್ಲಿ ಕಬ್ಬು ಕಟಾವು ಚಾಲೆಂಜ್, ಬಾ ಗುರು ಕಬ್ಬು ಕಡಿ ಹೆಸರಿನ ಪೋಸ್ಟರ್ ವೈರಲ್ ಆಗಿದೆ.

ಸಕ್ಕರೆ ನಾಡು ಮಂಡ್ಯದಲ್ಲಿ ಬೆಳೆದು ನಿಂತ ಕಬ್ಬು ಕಟಾವು ಮಾಡಿಸಲು ಕಾರ್ಮಿಕರು ಸಿಗದೆ ಮೈಶುಗರ್ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ‌ ಪರದಾಡುತ್ತಿದೆ. ಈ ನಿಟ್ಟಿನಲ್ಲಿ ಕ.ಸಾ.ಪ ಸಮ್ಮೇಳನ ಕಾರ್ಯಕ್ರಮದ ಹೆಸರಲ್ಲಿ ಕಬ್ಬು ಕಟಾವು ಎಂಬ  ಸ್ಪರ್ಧೆಯನ್ನ ಜಿಲ್ಲಾಡಳಿತ ಆಯೋಜಿಸಿದೆ. ಈ ಮೂಲಕ  ಬೆಳೆದು ನಿಂತ ಕಬ್ಬು ಕಟಾವು ಮಾಡಿಸಲು ಪ್ಲ್ಯಾನ್ ಮಾಡಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಕಬ್ಬು ಕಟಾವು ಚಾಲೆಂಜ್, ಬಾ ಗುರು ಕಬ್ಬು ಕಡಿ ಹೆಸರಿನ ಪೋಸ್ಟರ್ ವೈರಲ್ ಆಗಿದೆ.

ಕಬ್ಬು ಕಟಾವಿನ ಸಮಸ್ಯೆಗೆ ಜಿಲ್ಲಾಡಳಿತದ ಈ ಮಾಸ್ಟರ್ ಫ್ಲ್ಯಾನ್ ಎಷ್ಟರ ಮಟ್ಟಿಗೆ  ವರ್ಕೌಟ್ ಆಗುತ್ತೆ ಅನ್ನೋದೆ ಕುತೂಹಲ.