ವೈರಲ್

ಈಜಲು ತೆರಳಿದ್ದ ಯುವಕನ ಮೃತದೇಹ ಪತ್ತೆ

ನಿನ್ನೆಯಿಂದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಶೋಧಕಾರ್ಯ ನಡೆಸಿದ್ದರು. ಬರೋಬ್ಬರಿ 24 ಗಂಟೆ ಶೋಧಕಾರ್ಯ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ. ಮೃತದೇಹ ನೋಡಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ತುಮಕೂರು : ನದಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿದ ಘಟನೆಯೊಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ತಗ್ಗಿಹಳ್ಳಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಂತರ ಶೋಧದ ಬಳಿಕ ಕೊನೆಗೂ ಮೃತದೇಹ ಪತ್ತೆಯಾಗಿದೆ. ಹೇಮಂತ್ ಎಂಬ ಯುವಕ ಜಯಮಂಗಲಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದನು. ಸದ್ಯ ಮೃತದೇಹ ಪತ್ತೆಯಾಗಿದೆ.

ನಿನ್ನೆಯಿಂದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಶೋಧಕಾರ್ಯ ನಡೆಸಿದ್ದರು.  ಬರೋಬ್ಬರಿ 24 ಗಂಟೆ ಶೋಧಕಾರ್ಯ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.  ಮೃತದೇಹ ನೋಡಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹೇಮಂತ್ ಮೃತ ಯುವಕ ಆಂಧ್ರ ಪ್ರದೇಶದಲ್ಲಿ ಬಿ. ಟೆಕ್ ವ್ಯಾಸಂಗ ಮಾಡುತ್ತಿದ್ದನು. 



ಸದ್ಯ, ಮೃತದೇಹ ಮಧುಗಿರಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ರವಾನೆ ಮಾಡಲಿದ್ದಾರೆ. ಸದ್ಯ ಘಟನೆ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.