ಕರ್ನಾಟಕ

ರಂಗೇರಿದ ಚನ್ನಪಟ್ಟಣ ಅಖಾಡ..ಇಂದು NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..!

ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇಂದು NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಚನ್ನಪಟ್ಟಣ ಉಪಚುನಾವಣಾ ಕ್ಷೇತ್ರದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ. ಹೈವೋಲ್ಟೇಜ್ ಕ್ಷೇತ್ರದ NDA ಅಭ್ಯರ್ಥಿಯಾಗಿ ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಕಮಲ ತೊರೆದು ‘ಕೈ’ ಹಿಡಿದಿರುವ ಸಿ.ಪಿ.ಯೋಗೇಶ್ವರ್ ಹಾಗೂ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ಭಾರಿ ಪೈಪೋಟಿ ಇದೆ. ಘಟಾನುಘಟಿ ನಾಯಕ ಸಿಪಿವೈ ಗೆಲ್ಲಲೇ ಬೇಕು ಎಂದು ಪಣ ತೊಟ್ಟಿದ್ದು, ರಾಜಕಾರಣದ ಅದೃಷ್ಟ ಪರೀಕ್ಷೆಗೆ ಮುಂದಾದ ನಿಖಿಲ್ ಹೇಗೆ ಫೈಟ್ ಕೊಡ್ತಾರೆ ಎನ್ನುವುದು ಕಾದು ನೋಡಬೇಕಿದೆ.