ಕರ್ನಾಟಕ

TVಯಲ್ಲಿ ಬರೀ ದರ್ಶನ್ ನನ್ನೇ ತೋರಿಸುತ್ತೀರಿ.. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲಾ? ಸಚಿವ ರಾಜಣ್ಣ..

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಬರೀ ದರ್ಶನ್ ನನ್ನೇ ತೋರಿಸುತ್ತೀರಿ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲಾ? ಎಂದು ಕಿಡಿಕಾರಿದರು.

ಹಾಸನ :  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದು, ಈ ಬಗ್ಗೆ ಸಚಿವ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಬರಿ ದರ್ಶನ್ ಬಗ್ಗೆ ತೋರಿಸುತ್ತೀರಿ. ಅವನನ್ನು ಬಿಟ್ಟು ಬೇರೆ ಯಾವ ವಿಚಾರ ಇಲ್ಲವೇ? ಒಳ್ಳೆಯ ವಿಚಾರಗಳನ್ನು ತೋರಿಸಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ.

ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಬೆಳಿಗ್ಗೆ ಎದ್ದರೆ ಟಿವಿಯಲ್ಲಿ ಬರೀ ದರ್ಶನ್ ನನ್ನೇ ತೋರಿಸುತ್ತೀರಿ. ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲಾ? ಎಂದು ಕಿಡಿಕಾರಿದರು. ಒಳ್ಳೆಯ ಕಲಾವಿದ ಎಂಬುದನ್ನು ಎಲ್ಲರೂ ಒಪ್ಪುತ್ತೇವೆ. ಒಳ್ಳೆಯ ಕಲಾವಿದ ಎಂದ ಮಾತ್ರಕ್ಕೆ ಮಾಡಬಾರದ್ದು ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೆ. ಮೂರು ಹೊತ್ತು ಆತನ ಬಗ್ಗೆಯೇ ತೋರಿಸಿದರೆ ಹೇಗೆ? ಮತ್ತೆ ಮತ್ತೆ ಅದೇ ಸ್ಟೊರಿ ನೋಡಿ ಅಸಹ್ಯವಾಗುತ್ತೆ. ಟಿವಿಯವರಿಗೆ ಬೇರೆ ಕೆಲಸವಿಲ್ವಾ? ಎಂದು ಕಿಡಿಕಾರಿದ್ದಾರೆ.