ತುಮಕೂರು : ಸೇತುವೆ ಬಳಿ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಬಳಿಯ ತಗ್ಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನ ಹೇಮಂತ್ ಕುಮಾರ್ (21) ಎಂದು ಗುರುತಿಸಲಾಗಿದೆ.
ಜಯಮಂಗಲಿ ನದಿ ನೀರು ಹರಿಯುವ ಸೇತುವೆ ಬಳಿ ಯುವಕ ಈಜಲು ತೆರಳಿದ್ದ. ಈ ವೇಳೆ ನೀರಿನ ರಭಸ ಹೆಚ್ಚಾಗಿ ಯುವಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. 21 ವರ್ಷದ ಮಗನನ್ನ ಕಳೆದುಕೊಂಡು ಪೋಷಕರು ಕಂಗಾಲಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ.
ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವಕನ ಮೃತದೇಹಕ್ಕಾಗಿ ಹುಡುಕಾಟವನ್ನ ಆರಂಭಿಸಿದ್ದಾರೆ.